BPL CARD: ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್!
ಬಿಪಿಎಲ್ ಕಾರ್ಡ್ ಸೇರಿ ರಾಜ್ಯದ ಪಡಿತರ ಚೀಟಿ ಹೊಂದಿದವರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ಒಂದನ್ನು ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ವಿತರಣೆ ಮಾಡಲು ನಿರ್ಧರಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ನಮ್ಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ರಾಜ್ಯ ಸರ್ಕಾರದ ಬಗ್ಗೆ ಯೋಜನೆಯಡಿ ಪ್ರತಿಯೊಂದು ಫಲಾನುಭವಿಗಳಿಗೆ ರಾಜ್ಯದಿಂದ ಆಯ್ಕೆ, ಕೇಂದ್ರದಿಂದ 5 ಕೆ.ಜಿ ಸೇರಿ ಒಟ್ಟಾರೆಯಾಗಿ 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಪೈಕಿ ಪಡಿತರ ಚೀಟಿ ಹೊಂದಿರುವವರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಇಲ್ಲವೇ ಜೋಳವನ್ನು ನೀಡಲು ಆಹಾರ ಇಲಾಖೆಯು ಮುಂದಾಗಿದೆ ಎನ್ನಲಾಗಿದೆ, ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಬೇಕಾಗುತ್ತದೆ. ಕೆಲವು ಭಾಗಗಳಲ್ಲಿ ರಾಗಿ ಮತ್ತು ಕೆಲವು ಕಡೆ ಜೋಳಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದು, ಇದರೊಂದಿಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ಕೆಜಿ ರಾಗಿ, 2 ಕೆ.ಜಿ ಅಕ್ಕಿ, ಉತ್ತರ ಕರ್ನಾಟಕದ ಭಾಗಗಳಲ್ಲಿ ಎರಡು ಕೆಜಿ ಅಕ್ಕಿ, ಮೂರು ಕೆಜಿ ಜೋಳ ನೀಡಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.